ಶನಿವಾರ, ಮೇ 14, 2011

ಕೃಷ್ಣನಾಗಿ ಅನೀಶ್


ಕಂಗಳಿಗೆ ಹಬ್ಬವಾಯಿತಯ್ಯಾ..

ಮಂಗಳಾತ್ಮಕ ಪುರಂದರ ದಾಸರನು ಕಂಡು...||



ಸಕಲ ತೀರ್ಥ ಯಾತ್ರೆ ಮಾಡಿದ ಫಲವು

ಸಕಲ ಸತ್ಕರ್ಮ ಸಾಧಿಸಿದ ಫಲವು

ಭಕುತಿಯಿಂ ಭಾಗಿರಥಿ ಮಜ್ಜನದ ಫಲವು

ರುಕುಮಿಣಿ ಪತಿಯ ಪದಭಜಕರನ್ನು ಕಂಡು...|| ೧ ||



ಇವನ ನರನೆಂದವರು ನರಕದಲಿ ಬೀಳುವರು

ಕವಿಜನರು ಒಪ್ಪಿ ಕೈ ಹೊಡೆದು ಹೇಳಿದರು

ಅವನಿಯೊಳು ಅತಿ ದುರ್ಲಭಾವು ನಂದಗೋಪನ

ಕುವರನಿದ್ದೆಡೆ ವೈಕುಂಠ ವೆಂಬುವರ ಕಂಡು..... || ೨ ||



ಧನ್ಯನಾದೆನು ನಾನೂ ಮನುಜ ಜನ್ಮದಿ ಪುಟ್ಟಿ

ಮಾನ್ಯನಾದೆನು ಇನ್ನು ಈ ಜಗದೊಳಗೆ

ಪನ್ನಂಗ ಶಯನ ಶ್ರೀ ಕೃಷ್ಣನ ದಾಸರನು

ಚೆನ್ನಾಗಿ ಸ್ಮರಿಸಿ ಪಾವನನಾದೆನಿಂದು.... || ೩ ||

ರಚನೆ:ವ್ಯಾಸರಾಯ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ